ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ಕದಂಬ ಪಡೆ - ವಿದ್ಯಾರ್ಥಿ ಘಟಕ' ದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ಕದಂಬ ಪಡೆ - ವಿದ್ಯಾರ್ಥಿ ಘಟಕ' ದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರಿ ಕಲಾ ಕಾಲೇಜು ಮತ್ತು ಸರ್ಕಾರಿ ಆರ್.ಸಿ ಕಾಲೇಜುಗಳನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾಗಿ ಪರಿವರ್ತನೆ ಮಾಡಬಾರದು ಎಂದು 'ಕರ್ನಾಟಕ ಕದಂಬ ಪಡೆ - ವಿದ್ಯಾರ್ಥಿ ಘಟಕ' ದ ಸದಸ್ಯರು ಅಗ್ರಹಿಸಿದರು. ಜತೆಗೆ ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಹೃದಯಭಾಗದಲ್ಲಿರುವ ಸರ್ಕಾರಿ ಕಲಾ ಕಾಲೇಜು ಮತ್ತು ಸರ್ಕಾರಿ ಆರ್.ಸಿ ಕಾಲೇಜುಗಳನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾಗಿ ಪರಿವರ್ತನೆ ಮಾಡುತ್ತಿರುವುದರ ವಿರುದ್ಧ ಪ್ರತಿಭಟಿಸಿ ಐತಿಹಾಸಿಕ ಹಿನ್ನಲೆಯುಳ್ಳ ಸರ್ಕಾರಿ ಕಲಾ ಕಾಲೇಜು ಮತ್ತು ಸರ್ಕಾರಿ ಆರ್.ಸಿ ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾಗಿ ಮಾಡುವ ನಿರ್ಧಾರವನ್ನು ಕೂಡಲೇ ಕೈಬಿಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಮ್ಮ ಸಂಘಡನೆಯ ವತಿಯಿಂದ ಬೃಹತ್ ಪ್ರತಿಭಟನೆಗೆ ಆಗಮಿಸಿ ವರದಿ ಮಾಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಮುಂದುವರೆದು ಸರ್ಕಾರಿ ಕಲಾ ಕಾಲೇಜಿನ ಆಟದ ಮೈದಾನವನ್ನು ಖಾಸಗಿ ಕ್ರಿಕೆಟ್ ಕ್ಲಬ್ನೊಂದಿಗೆ ಪ್ರ...