ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ (ರಿ) ಹಾಗೂ ವೈಯಾ ವಿಕಾಸ್ ಸಂಸ್ಥೆಯ ಸಹಯೋಗದೊಂದಿಗೆ "ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ" ನಡೆಯಿತು.
ಬೆಂಗಳೂರು, ಜುಲೈ 21, 2025
ಬೆಂಗಳೂರಿನ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ (ರಿ) ಹಾಗೂ ವೈಯಾ ವಿಕಾಸ್ ಸಂಸ್ಥೆಯ ಸಹಯೋಗದೊಂದಿಗೆ "ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ" ನಡೆಯಿತು.
ಹೆಸರಾಂತ ಖ್ಯಾತ ಆಸ್ಪತ್ರೆಗಳಾದ “ಸ್ಪರ್ಶ ಆಸ್ಪತ್ರೆ” ಮತ್ತು “ವಾಸನ್ ಐ ಕೇರ್” ಆಸ್ಪತ್ರೆಗಳಿಂದ ನುರಿತ ಅನುಭವಶಾಲಿ ವೈದ್ಯರುಗಳಿಂದ "ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ" ನಡೆಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಭೈರಪ್ಪ ಅವರ ನೇತೃತ್ವದಲ್ಲಿ ಈ ಶಿಬಿರ ನಡೆಯಿತು.
ಈ ಶಿಬಿರದಲ್ಲಿ 500ಕ್ಕೂ ಹೆಚ್ಚು ಸರ್ಕಾರಿ ನಿವೃತ್ತ ನೌಕರರು ತಮ್ಮ ಆರೋಗ್ಯತಪಾಸಣೆ ಮಾಡಿಸಿಕೊಂಡರು.
Comments
Post a Comment