ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ. ವಿಜಯೇಂದ್ರ
ಬೆಂಗಳೂರು, ಜುಲೈ 2, 2025
ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ
ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ.ವಿಜಯೇಂದ್ರ
ರೈತರ ಆತ್ಮಹತ್ಯೆಗಳು, ಅಧಿಕಾರಿಗಳ ಆತ್ಮಹತ್ಯೆಗಳು, ಜೊತೆಗೇ ಗುತ್ತಿಗೆದಾರರೂÀ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ರಾಜ್ಯದಲ್ಲಿ ನಿರಂತರವಾಗಿ ನಡೆದಿದೆ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಒಪ್ಪಿಕೊಂಡಿದ್ದಾರೆ ಎಂದರು.
ಹಿಂದೂಗಳ ಮೇಲೆ ದೌರ್ಜನ್ಯ..
ಸಿಂಧನೂರಿನಲ್ಲಿ ಹಿಂದೂ ಕಾರ್ಯಕರ್ತರನ್ನು ಬೆದರಿಸಿದ್ದಾರೆ. ಸಂಕೇಶ್ವರದಲ್ಲೂ ಶ್ರೀರಾಮಸೇನೆ ಕಾರ್ಯಕರ್ತರನ್ನು ಥಳಿಸಿದ್ದಾರೆ. ಪದೇ ಪದೇ ರಾಜ್ಯದಲ್ಲಿ ಗೋವುಗಳ ಕೆಚ್ಚಲನ್ನು ಕತ್ತರಿಸಲಾಗುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಚಕಾರ ಎತ್ತುತ್ತಿಲ್ಲ ಎಂದು ಟೀಕಿಸಿದರು. ಸರಕಾರದ ಪಾಪದ ಕೊಡ ತುಂಬಿದೆ; ಜನರು ನಿಮಗೆ ಶಾಪ ಹಾಕುತ್ತಿದ್ದಾರೆ. ಹಸುವಿನ ಕೆಚ್ಚಲು ಕೊಯ್ಯುವ ಘಟನಾವಳಿ ಪದೇಪದೇ ನಡೆದಿದೆ. ಭಗವಂತನೂ ಸಿದ್ದರಾಮ್ಯನವರ ಸರಕಾರಕ್ಕೆ ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದು ನುಡಿದರು. ಗೃಹ ಸಚಿವರು ಕಠಿಣ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಇದರ ಕಡೆ ಗಮನಿಸಿ ಎಂದು ಒತ್ತಾಯಿಸಿದರು.
ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ, ಶಾಸಕರಾದ ಮಾನಪ್ಪ ಡಿ ವಜ್ಜಲ್, ಡಾ. ಶಿವರಾಜ್ ಪಾಟೀಲ್ ಮತ್ತು ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ಉಪಸ್ಥಿತರಿದ್ದರು.
Comments
Post a Comment