ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ 'ವಕೀಲರ ಸಂಘದ ಪದಾಧಿಕಾರಿಗಳ ರಾಜ್ಯ ಕಾನೂನು ಸಮ್ಮೇಳನ' ಆಯೋಜಿಸಲಾಗಿತ್ತು.
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ 'ವಕೀಲರ ಸಂಘದ ಪದಾಧಿಕಾರಿಗಳ ರಾಜ್ಯ ಕಾನೂನು ಸಮ್ಮೇಳನ' ಆಯೋಜಿಸಲಾಗಿತ್ತು. ಈ ಮಹತ್ವದ ಸಮ್ಮೇಳನ 'ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ವತಿಯಿಂದ ನಡೆಯಿತು. ಈ ಸಮ್ಮೇಳನವನ್ನು ಕೇಂದ್ರ ಸಚಿವರಾದ ಕಿರಣ್ ರಿಜಿಜು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಹಾಗೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಮಿತ್ತಲಕೋಡ್ ಅವರು ಉದ್ಘಾಟನೆ ನೆರವೇರಿಸಿದರು. ಈ ಸಮ್ಮೇಳನದಲ್ಲಿ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಈ ನೆಲದ ಕಾನೂನಿನ ಸೇವೆ ದೊರಕಬೇಕಿದೆ, ಈ ನಿಟ್ಟಿನಲ್ಲಿ ವಕೀಲ ಸಮುದಾಯ ಜನರ ದನಿಯಾಗಿ ಸೇವೆ ಸಲ್ಲಿಸಿ ನ್ಯಾಯ ದಾನ ವಿತರಣೆಯಲ್ಲಿ ಮಹತ್ವ ಪಾತ್ರ ನಿರ್ವಹಿಸಲಿ ಎಂಬ ಕರೆ ನೀಡಲಾಯಿತು. ಜಗತ್ತಿನ ಅತ್ಯಂತ ಎತ್ತರದ ಪ್ರಜಾಪ್ರಭುತ್ವದ ದೇಶ ಭಾರತ ಇಂದು ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳುತ್ತಿರುವ ನಿಟ್ಟಿನಲ್ಲಿ ಸದೃಢ ಹೆಜ್ಜೆ ಹಾಕುತ್ತಿದೆ, ಇದಕ್ಕೆ ನ್ಯಾಯಾಂಗ ವ್ಯವಸ್ಥೆ ಪೂರಕವಾಗಿ ಕೆಲಸ ಮಾಡುತ್ತಿದೆ. ಸಂವಿಧಾನದ ಆಶಯಗಳನ್ನು ಕಾಯುವ ನಿಟ್ಟಿನಲ್ಲಿ ಘನ ನ್ಯಾಯಾಲಯಗಳು ಭರವಸೆ ಬೆಳಕಾಗಿ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿವೆ, ಇದರಲ್ಲಿ ವಕೀಲ ಸಮೂಹದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಓಡುತ್ತಿರುವ ಜಗತ್ತಿನೊಂದಿಗೆ ನ್ಯಾಯಾಂಗ ವ್ಯವಸ್ಥೆಯೂ ಕೂಡ ಸವಾಲುಗಳನ್ನು...