ಮನೀಶ್ ಗುರೂಜಿ ಹಾಗೂ ಅವರ ಸಹಚರರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರು ನಗರ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಒತ್ತಾಯಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಬೆಂಗಳೂರು ವಕೀಲರ ಸಂಘ'ದಿಂದ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಮಾತನಾಡಿದರು.

 ಬೆಂಗಳೂರು ವಕೀಲರ ಸಂಘದ ಸದಸ್ಯರಾದ ಗಿರೀಶ್ ಎಂಬುವರ ಮೇಲೆ 4-10-2025ರಂದು ಗೊರೂರು ಬಳಿ ಶ್ರೀ ಚಾಮುಂಡೇಶ್ವರಿ ಪೀಠದ ಮನೀಶ್ ಗುರೂಜಿ ಹಾಗೂ ಅವರ ಸಹಚರರು ಹಲ್ಲೆ ಮಾಡಿದ್ದಾರೆ ಎಂದು ವಿವೇಕ್ ಸುಬ್ಬಾರೆಡ್ಡಿ ಅವರು ಆರೋಪಿಸಿದರು. 

 ಕ್ಷುಲ್ಲಕ ಕಾರಣಕ್ಕೆ ಮನೀಶ್ ಗುರೂಜಿ ಹಾಗೂ ಅವರ ಸಹಚರರು ವಕೀಲರಾದ ಗಿರೀಶ್ ಹಾಗೂ ಅವರ ಕುಟುಂಬಸ್ಥರನ್ನು ಮನಬಂದಂತೆ ತಥಳಿಸಿದ್ದಾರೆ ಎಂದು ವಿವೇಕ್ ಸುಬ್ಬಾರೆಡ್ಡಿ ಅವರು ಮಾಧ್ಯಮಗಳಿಗೆ ತಿಳಿಸಿದರು. 

 ಈ ಸಂಬಂಧ ವಕೀಲರದ ಗಿರೀಶ್ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದ ಸಂದರ್ಭದಲ್ಲಿ ಪೊಲೀಸರು ಸಹ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ವಿವೇಕ್ ಸುಬ್ಬಾರೆಡ್ಡಿ ಅವರು ಆರೋಪಿಸಿದರು. 

 ವಕೀಲರಾದ ಗಿರೀಶ್ ಅವರ ಮೇಲೆ ನಡೆದ ಹಲ್ಲೆ ಸಂಬಂಧ ಪ್ರಕರಣ ದಾಖಲಾಗಿದ್ದು, ಮನೀಶ್ ಗುರೂಜಿ ಹಾಗೂ ಅವರ ಸಹಚರರ ವಿರುದ್ಧ FIR ದಾಖಲಾಗಿರುತ್ತದೆ. ಅವರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ವಿವೇಕ್ ಸುಬ್ಬಾರೆಡ್ಡಿ ಅವರು ಒತ್ತಾಯಿಸಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.