ಬೆಂಗಳೂರಿನ ನಿಮ್ಹಾನ್ಸ್‌ ಕನ್ವೆನ್ಷನ್ ಕೇಂದ್ರದಲ್ಲಿಂದು ʼಕೇಂದ್ರ ರೇಷ್ಮೆ ಮಂಡಳಿ - ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆಯʼ ಸುವರ್ಣ ಮಹೋತ್ಸವ ಸಮಾರಂಭ ನಡೆಯಿತು.

ಬೆಂಗಳೂರಿನ ನಿಮ್ಹಾನ್ಸ್‌ ಕನ್ವೆನ್ಷನ್ ಕೇಂದ್ರದಲ್ಲಿಂದು ʼಕೇಂದ್ರ ರೇಷ್ಮೆ ಮಂಡಳಿ - ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆಯʼ ಸುವರ್ಣ ಮಹೋತ್ಸವ ಸಮಾರಂಭ ನಡೆಯಿತು. 

  ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ. ಎನ್. ಮಂಜುನಾಥ್ ಅವರು ಉಪಸ್ಥಿತರಿದ್ದರು. 

ಈ ವೇಳೆ ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ರೇಷ್ಮೆ ತಳಿಗಳ ಪರಿವೀಕ್ಷಣೆ ನಡೆಸಿದರು. 

ಇದೇ ವೇಳೆ, ಸುದೀರ್ಘ 50 ವರ್ಷಗಳ ಕಾಲ ರೇಷ್ಮೆ ಹುಳು ಬೀಜ ಸಂಘಟನೆಯ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ, ರೇಷ್ಮೆ ಬೆಳೆಗಾರ ರೈತರಿಗೆ ನೆರವಾದ ಸಮಸ್ತ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ, ಕೇಂದ್ರ ರೇಷ್ಮೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪಿ. ಶಿವಕುಮಾರ್‌ ಅವರು, ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆಯ ನಿರ್ದೇಶಕರಾದ ಡಾ. ಎಸ್.‌ ಮಂಥಿರಾಮೂರ್ತಿಯವರು ಸೇರಿದಂತೆ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.