ಪತ್ರಕರ್ತರ ‌ಹಕ್ಕುಗಳ ರಕ್ಷಣೆಗೆ ಮಸೂದೆ ಬಿನ್ನಿಷ್ ಥಾಮಸ್ ವಿಶ್ವಾಸ

ಪತ್ರಕರ್ತರ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಇಂಟರ್ನ್ಯಾಷನಲ್ ಕೌನ್ಸಿಲ್ ಫಾರ್ ಜರ್ನಲಿಸ್ಟ್ ನಿರ್ದೇಶಕ ಬಿನ್ನಿಷ್ ಥಾಮಸ್ ಅವರಿಗೆ ಪತ್ರಕರ್ತರು ಜರ್ನಲಿಸ್ಟ್ ಅಡ್ವೊಕೇಟ್ ಎಂದು ಬಿರುದು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಪತ್ರಕರ್ತರ ಹಕ್ಕುಗಳ ಹೋರಾಟಗಾರ ಬಿನ್ನಿಸ್ ಥಾಮಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತದ ಸ್ಥಾನ 151 ಅಗಿರುವುದು ನಾಚಿಕೆಗೇಡಿನ ವಿಷಯ ಎಂದರು.

ಭಾರತದಲ್ಲಿ ಪತ್ರಕರ್ತರು ಅಭದ್ರತೆಯ ವಾತಾವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪತ್ರಕರ್ತರ ಹಕ್ಕುಗಳ ರಕ್ಷಣೆಗಾಗಿ ಮಸೂದೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದುರು.

ಡಿಸೆಂಬರ್ ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಪತ್ರಕರ್ತರ ರಕ್ಷಣಾ ಮಸೂದೆ ಮಂಡಿಸುವ ಸಾಧ್ಯತೆ ಇದೆ ಎಂದು ಬಿನ್ನಿಷ್ ಥಾಮಸ್ ವಿಶ್ವಾಸ ವ್ಯಕ್ತಪಡಿಸಿದರು.

ವೈದ್ಯರು ಹಾಗೂ‌ ವಕೀಲರ ಹಕ್ಕುಗಳ ರಕ್ಷಣೆಗಾಗಿ ಮಸೂದೆ ಜಾರಿಗೆ ತದಿರುವಂತೆ ಪತ್ರಕರ್ತರ ರಕ್ಷಣೆಗಾಗಿ ಮಸೂದೆ ತರಲಾಗುತ್ತದೆ ಎಂದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.