ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ 94ನೇ ವರ್ಷದ ಹುಟ್ಟುಹಬ್ಬ; ಅಪ್ಪಾಜಿ ಕ್ಯಾಂಟೀನ್ ನಲ್ಲಿ ₹1 ಗೆ ಮುದ್ದೆ ಊಟ ವಿತರಣೆ
ಬೆಂಗಳೂರು, ಮೇ 18, 2026
ವಿಧಾನ ಪರಿಷತ್ತಿನ ಸದಸ್ಯರೂ ಆಗಿರುವ ಟಿ.ಎ. ಶರವಣ, 'ಅಪ್ಪಾಜಿ ಕ್ಯಾಂಟೀನ್' ನಡೆಸುತ್ತಿದ್ದಾರೆ.
ಮುದ್ದೆ ಊಟದ ಜತೆಗೇ ₹1ಕ್ಕೆ ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಾವಿರಾರು ಜನರು ಸರದಿಯಲ್ಲಿ ನಿಂತು ಊಟ, ಉಪಾಹಾರ ಸವಿದರು. ಬಿಗ್ಬಾಸ್ ವಿಜೇತ ಗಿಲ್ಲಿ ನಟ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
'ಹಸಿದವರಿಗೆ ಮೊದಲು ಅನ್ನ ನೀಡಬೇಕು ಎಂಬ ದೇವೇಗೌಡರ ಆಶಯದಂತೆ 9 ವರ್ಷಗಳಿಂದ ಈ ಕ್ಯಾಂಟೀನ್ ನಡೆಸಿಕೊಂಡು ಬರುತ್ತಿದ್ದೇನೆ. ಅತಿ ಕಡಿಮೆ ಬೆಲೆಯಲ್ಲಿ ಊಟ, ಉಪಾಹಾರ ಒದಗಿಸಲಾಗುತ್ತಿದೆ.
ಕೋವಿಡ್ ಸಮಯದಲ್ಲಿ ಈ ಕ್ಯಾಂಟೀನ್ ಲಕ್ಷಾಂತರ ಜನರ ಹಸಿವು ನೀಗಿಸಿತ್ತು' ಎಂದು ಶರವಣ ಹೇಳಿದರು.
ಇದೇ ದಿನ ಪೌರ ಕಾರ್ಮಿಕರು ಮತ್ತು ಆಟೊರಿಕ್ಷಾ ಚಾಲಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು.
Comments
Post a Comment